Call Us :
+91 96860 00046
CBSE

Shakthi Education Trust

+91 9108043552
info@shakthi.edu.in

2025-26 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಮತ್ತು ಉದ್ಘಾಟನಾ ಸಮಾರಂಭವು ಜೂನ್‌ 28 ರಂದು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನೆರವೇರಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಪಾಧ್ಯಕ್ಷರು, ಉನ್ನತ ಶಿಕ್ಷಣ ಪರಿಷತ್ತು, ಗೋವಾ ಸರಕಾರ ಹಾಗೂ, ಉಪಾಧ್ಯಕ್ಷರು, ತಾಂತ್ರಿಕ ಶಿಕ್ಷಣ, ನಿಟ್ಟೆ ವಿಶ್ವವಿದ್ಯಾಲಯ,ಪ್ರೊ ಡಾ. ಗೋಪಾಲ್ ಮೊಗೆರಾಯ, ಇವರು ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಬಳಿಕ ಮಾತನಾಡಿದ ಅವರು ಮೊದಲನೆಯದಾಗಿ ನಾನು ಈ ಶಾಲೆಗೆ ಹಾಗೂ ಈ ಶಾಲೆಯ ಆಡಳಿತ ಮಂಡಳಿಯವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ, ಯಾಕೆಂದರೆ ಇಂತಹ ಶಿಸ್ತು ಹಾಗೂ ಹಾಗೂ ಸಂಸ್ಕಾರಭರಿತ ವಿದ್ಯಾರ್ಥಿಗಳನ್ನು ಈ ಶಾಲೆಯು ನಮ್ಮ ಸಮಾಜಕ್ಕೆ ನೀಡುತ್ತಾ ಇದೆ. ಇಲ್ಲಿನ ಶಿಸ್ತು ನೋಡಿ ನನಗೆ ತುಂಬಾ ಖುಷಿಯಾಯಿತು. ಬದುಕಲ್ಲಿ ಏನಾದ್ರೂ ಸಾಧಿಸಬೇಕಾದರೆ ಶಿಸ್ತು ಹಾಗೂ ಕಠಿಣ ಪರಿಶ್ರಮ ಅಗತ್ಯ .ಸರಕಾರವು ಸ್ಮಾರ್ಟ್ ಸಿಟಿಯನ್ನು ಮಾಡಬಹುದು, ಆದರೆ ಸ್ಮಾರ್ಟ್ ಪ್ರಜೆಗಳನ್ನು ತಯಾರಿಸೋದು ಇಂತಹ ಶಾಲೆ ಹಾಗೂ ಆಲ್ಲಿನ ಶಿಕ್ಷಕರು ಎಂದರು.

ಭಾರತವು ಅತ್ಯಂತ ಸಂಸ್ಕಾರಭರಿತವಾಗಿದೆ, ಆಂಗ್ಲ ಭಾಷೆಯಲ್ಲಿ ಪಾಪ ಎನ್ನುವ ಪದಕ್ಕೆ ಅರ್ಥವಿದ್ದರೆ ಪುಣ್ಯ ಎಂಬ ಪದಕ್ಕೆ ಸರಿಯಾದ ಅರ್ಥವನ್ನು ಆಂಗ್ಲ ಭಾಷೆ ಕೊಡುವುದಿಲ್ಲ. ಆದರೆ ನಮ್ಮ ಭಾರತದಲ್ಲಿ ಪುಣ್ಯ ಎಂಬ ಪದಕ್ಕೆ ತುಂಬಾ ಮಹತ್ವವಿದೆ. ಹಾಗಾಗಿ ನಾವು ಪಾಶ್ಚಾತ್ಯ ಸಂಸ್ಕೃತಿಯ ಕಡೆಗೆ ಒಲವು ತೋರಿಸದೆ ನಮ್ಮ ಭಾರತೀಯ ಸಂಸ್ಕೃತಿಯನ್ನು ಗೌರವಿಸಬೇಕು ಎಂದು ಮಕ್ಕಳಿಗೆ ಹಿತನುಡಿದರು. ಒಬ್ಬ ನಾಯಕನಾದವನು ಯಾರನ್ನೋ ಮೆಚ್ಚಿಸುವುದಕ್ಕೋಸ್ಕರ ಏನೇನೋ ಮಾಡಬಾರದು, ಆತ ಪ್ರಾಮಾಣಿಕವಾಗಿ ತನ್ನ ಕಾರ್ಯದಲ್ಲಿ ಶಿಸ್ತು ಹಾಗೂ ಪಾರದರ್ಶಕತೆಯನ್ನು ಕಾಪಾಡಬೇಕು. ಹಾಗಿದ್ದಾಗ ಮಾತ್ರ ಅವನು ನಿಜವಾದ ನಾಯಕನಾಗಲು ಸಾಧ್ಯ ಹಾಗೂ ಇನ್ನೊಬ್ಬರಿಂದ ಪ್ರಶಂಸೆ ಹಾಗೂ ಗೌರವವನ್ನು ಪಡೆಯಲು ಸಾಧ್ಯ ಎಂದರು.

ಬಳಿಕ ವೇದಿಕೆಯಲ್ಲಿದ್ದ ಗಣ್ಯರೆಲ್ಲರೂ ಸೇರಿ ಅತಿಥಿಗಳಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಮತ್ತು ವಿವಿಧ ವಿಭಾಗಗಳಾದ ಅಗ್ನಿ, ವಾಯು, ಜಲ, ಪೃಥ್ವಿ ನಾಮಾಂಕಿತ ದಳಗಳ ಧ್ವಜವನ್ನು ವಿತರಿಸುವ ಮೂಲಕ ನಾಯಕರ ಪದಗ್ರಹಣವು ನಡೆಯಿತು.

ಗಣ್ಯರೆಲ್ಲರು ಸೇರಿ ನೂತನವಾಗಿ ನೇಮಕಗೊಂಡ ವಿಧ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಬಾಡ್ಜ್ ನೀಡಿದರು. ಬಳಿಕ ವಿಧ್ಯಾರ್ಥಿ ಸಂಘದ ನಾಯಕ ತಮೀಮ್ ರೂಮಿ, ನಾಯಕಿ ಸಾನ್ವಿ ಕಿಶೋರ್ ಹಾಗೂ ಇನ್ನಿತರ ಪದಾಧಿಕಾರಿಗಳೆಲ್ಲರು ಪ್ರಮಾಣವಚನವನ್ನು ಸ್ವೀಕರಿಸಿದರು.

ಶಕ್ತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಬಬಿತಾ ಸೂರಜ್ ಅವರು ಈ ಪ್ರಮಾಣವಚನ ನೆರವೇರಿಸಿದರು. ನಂತರ ವಿದ್ಯಾರ್ಥಿ ಸಂಘದ ನಾಯಕ ತಮೀಮ್ ರೂಮಿ ಹಾಗೂ ನಾಯಕಿ ಸಾನ್ವಿ ಕಿಶೋರ್ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ಶಾಲಾ ವಿದ್ಯಾರ್ಥಿಗಳು ಸಾಮೂಹಿಕವಾಗಿ ಐಕ್ಯತಾ ಗೀತೆಯನ್ನು ಹಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿಯಾಗಿರುವ ಡಾ. ಕೆ. ಸಿ. ನಾೖಕ್‌ ಅವರು ನೂತನವಾಗಿ ನೇಮಕಗೊಂಡಿರುವ ವಿಧ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು. ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ ಶ್ರೀ ರಮೇಶ್ ಕೆ., ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವೆಂಕಟೇಶ್ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತಿದ್ದರು. ಶ್ರೀಮತಿ ಆನೆಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಸ್ಮಿಶಾ ಅತಿಥಿಗಳನ್ನು ಸ್ವಾಗತಿಸಿದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal MSc, B.Ed 25 Years’ Experience...