Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಕನ್ನಡ ರಾಜ್ಯೋತ್ಸವ ದಿನಾಚರಣೆ

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ನಾಡಗೀತೆಯೊಂದಿಗೆ ನಾಡಧ್ವಜವನ್ನು ಆರೋಹಣವನ್ನು ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಸಂಜಿತ್ ನಾೖಕ್‌ ಅವರು ನೆರೆವೇರಿಸಿದರು. ನಂತರ ರೇಷ್ಮಾ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರಾದ ಶ್ರೀ ಪ್ರಕಾಶ್ ತುಮಿನಾಡ್ ಅವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸಂಸ್ಕಾರ ಮತ್ತು ಶಿಸ್ತನ್ನು ನಾನು ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನೋಡಿ ತುಂಬ ಸಂತೋಷವಾಯಿತು. ಕನ್ನಡ ನಾಡು ನುಡಿಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯೆಂದು ಹೇಳಿದರು. ನಾವು ಅನೇಕ ಚಲನಚಿತ್ರದ ಮೂಲಕ ಕನ್ನಡ ನಾಡನ್ನು ಉಳಿಸುವ ನಿಟ್ಟಿನಲ್ಲಿ ಉತ್ತಮವಾಗಿರುವಂತಹ ಸಂದೇಶವನ್ನು ನೀಡಿರುತ್ತೇವೆ. ನೀವೆಲ್ಲರು ಇಂತಹ ಚಲನಚಿತ್ರಕ್ಕೆ ಪ್ರೋತ್ಸಾಹವನ್ನು ಮುಂದಿನ ದಿನಗಳಲ್ಲಿಯೂ ನೀಡಿ ಎಂದು ರಾಜ್ಯೋತ್ಸವದ ಶುಭಾಶಯವನ್ನು ಕೋರಿದರು. ಮಕ್ಕಳಿಗೋಸ್ಕರ ನಿರ್ಮಾಣಗೊಂಡಿರುವ ಲೈಟ್ ಹೌಸ್ ಚಲನಚಿತ್ರ ತಮ್ಮೆಲ್ಲರ ಸಹಕಾರ ಅತಿ ಅಗತ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಲೈಟ್ ಹೌಸ್ ಕನ್ನಡ ಚಲನಚಿತ್ರ ನಿರ್ದೇಶಕರಾದ ಶ್ರೀ ಸಂದೀಪ್ ಕಾಮತ್ ಅಜೆಕಾರು ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ ನಾವು ಲೈಟ್ ಹೌಸ್ ಎಂಬ ಕನ್ನಡ ಮಕ್ಕಳ ಚಲನಚಿತ್ರವನ್ನು ನಿರ್ಮಿಸಿದ್ದೇವೆ. ಇದರ ಉದ್ದೇಶ ಮಕ್ಕಳಲ್ಲಿ ಸಮಾಜಕ್ಕೆ ಉತ್ತಮವಾಗಿರುವಂತಹ ಸಂದೇಶವನ್ನು ಕೊಡುವುದಾಗಿದೆ. ನಾವು ಕಣ್ಣಿನ ದಾನದ ಬಗ್ಗೆ ಅರಿವನ್ನು ಮೂಡಿಸುವುದು ಈ ಚಲನಚಿತ್ರದ ಉದ್ದೇಶವಾಗಿದೆ. ಈ ಚಲನಚಿತ್ರದ ಮೂಲಕ ಮಣ್ಣಲ್ಲಿ ಮಣ್ಣಾಗುವ ಹಾಗೂ ಚಿತೆಯಲ್ಲಿ ಉರಿದು ಬೂದಿಯಾಗುವ ಕಣ್ಣನ್ನು ನಮ್ಮ ಸಾವಿನ ನಂತರ ದಾನ ಮಾಡುವ ಮೂಲಕ ಅಂದ ಮಕ್ಕಳನ್ನು ರಕ್ಷಣೆ ಮಾಡುವುದು ಇದರ ಉದ್ದೇಶವೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕರಾಗಿರುವ ಶ್ರೀ ಸಂಜಿತ್ ನಾೖಕ್‌ರವರು ನಮ್ಮ ಕರ್ನಾಟಕದ ಕನ್ನಡ ಭಾಷೆಯ ಮಹತ್ವದ ಬಗ್ಗೆ ಹಾಗೂ ನಮ್ಮನ್ನಾಳಿದ ವಿಜಯನಗರ ಸಾಮ್ರಾಜ್ಯ, ಮೈಸೂರು ಸಂಸ್ಥಾನದ ಕುರಿತಂತೆ ಸವಿಸ್ತಾರವಾಗಿರುವಂತಹ ಮಾಹಿತಿಯನ್ನು ನೀಡಿದರು. ನಾವು ನಮ್ಮ ಭಾಷೆಯನ್ನು ಪ್ರೀತಿಸುವುದು ಹಾಗೂ ಗೌರವಿಸುವುದರೊಂದಿಗೆ ಭಾರತೀಯರಾಗಿ ಜೀವನವನ್ನು ನಡೆಸಬೇಕೆಂದು ಕರೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ರಂಗ ಭೂಮಿ ಕಲಾವಿದರು ಲೈಟ್ ಹೌಸ್ ಚಲನಚಿತ್ರದ ಕಲಾವಿದರಾದ ನಮಿತ ಕಿರಣ್, ತಿಮ್ಮಪ್ಪ ಕುಲಾಲ್, ರೋಹನ್ ನಾಯಕ್, ಭುವನೇಶ್ ಪ್ರಭು, ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ. ನಾೖಕ್‌, ಪ್ರಧಾನ ಸಲಹೆಗಾರರಾದ ರಮೇಶ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ಬಬಿತಾ ಸೂರಜ್ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಶಾಲಾ ಪ್ರಾರ್ಥನೆ ಹಾಗೂ ಕುವೆಂಪು ರಚನೆಯ ಹಾಡಿಗೆ ಶಾಲಾ ವಿದ್ಯಾರ್ಥಿನಿಯರು ಭರತನಾಟ್ಯದ ಮೂಲಕ ಸ್ವಾಗತಿಸಿದರು.

ಉಪನ್ಯಾಸಕರಾದ ಸುನಿಲ್ ಕಾರ್ಯಕ್ರಮ ನಿರೂಪಿಸಿದರೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ನಂತರ ಲೈಟ್ ಹೌಸ್ ಮಕ್ಕಳ ಚಲನಚಿತ್ರದ ಪ್ರದರ್ಶನ ನಡೆಯಿತು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal MSc, B.Ed 25 Years’ Experience...