Call Us :
+91 96860 00046
CBSE

Shakthi Education Trust

+91 9108043552
info@shakthi.edu.in

ಶಕ್ತಿ ವಿದ್ಯಾಸಂಸ್ಥೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಶೀರ್ವಾದ ಸಭಾ, ಮಾತಾ-ಪಿತೃ ಪೂಜನ ಕಾರ್ಯಕ್ರಮ

ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿರುವ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಆಶೀರ್ವಾದ ಸಭಾ, ಮಾತಾ ಪಿತೃ ಪೂಜನಾ ಕಾರ್ಯಕ್ರಮ ಶನಿವಾರದಂದು ಜರುಗಿತು.

ಫೆಬ್ರವರಿ 15ನೇ ತಾರೀಕಿನಿಂದ ಆರಂಭವಾಗುತ್ತಿರುವ ಸಿ.ಬಿ.ಎಸ್.ಇ. ಬೋರ್ಡ್ ಪರೀಕ್ಷೆಯನ್ನು ಬರೆಯುತ್ತಿರುವ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 146 ವಿದ್ಯಾರ್ಥಿಗಳಿಗೆ ಶುಭ ಹಾರೈಸಲು ವಿದ್ಯಾರ್ಥಿಗಳ ಪೋಷಕರು ಈ ಆಶೀರ್ವಾದ ಸಭಾ ಕಾರ್‍ಯಕ್ರಮದಲ್ಲಿ ಭಾಗಿಯಾಗಿ ತಮ್ಮ ತಮ್ಮ ಮಕ್ಕಳಿಗೆ ಆಶೀರ್ವಾದ ಮಾಡಿದರು.

 

ಈ ಕಾರ್‍ಯಕ್ರಮದಲ್ಲಿ ಭಾರತೀಯ ಸಂಸ್ಕಾರದಂತೆ ವಿದ್ಯಾರ್ಥಿಗಳೆಲ್ಲರೂ ತಮ್ಮ ಪೋಷಕರ ಪಾದಪೂಜೆ ಮಾಡಿ ಅವರ ಅಶೀರ್ವಾದವನ್ನು ಪಡೆದರು. ಗಣ್ಯರ ಹಾಗೂ ಅವರ ಶಿಕ್ಷಕರ ಆಶೀರ್ವಾದವನ್ನೂ ಪಡೆದರು.

ಸಂಸ್ಕೃತ ಅಧ್ಯಾಪಕಿ ಮಾನಸ ಅವರು ಈ ಮಾತಾ ಪಿತೃ ಪೂಜನಾ ಮಹತ್ವವನ್ನು ಸಂಸ್ಕೃತ ಶ್ಲೋಕಗಳ ಮುಖಾಂತರ ಅರ್ಥಪೂರ್ಣವಾಗಿ ತಿಳಿಸಿದರು.

ನಂತರ ಈ ಕಾರ್‍ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ಅವರು ’ಮಕ್ಕಳೆಲ್ಲರೂ ತಮ್ಮ ಅಭ್ಯಾಸದಲ್ಲಿ ನೂರಕ್ಕೆ ನೂರು ಶ್ರಮವನ್ನು ಕೊಟ್ಟು ಓದುತ್ತಿದ್ದಾರೆ. ಈ ಹಂತದಲ್ಲಿ ಮಕ್ಕಳಿಗೆ ಯಾವುದೇ ರೀತಿಯ ಒತ್ತಡವನ್ನು ಪೋಷಕರು ಹೇರಬಾರದು. ಪ್ರೋತ್ಸಾಹದಾಯಕ ನುಡಿಗಳಿಂದ ಅವರಿಗೆ ಪರೀಕ್ಷೆ ಬರೆಯಲು ಸ್ಪೂರ್ತಿಯನ್ನು ನೀಡಬೇಕು. ಎಲ್ಲಾ ಶಿಕ್ಷಕರೂ ಕೂಡಾ ಬೋರ್ಡ್ ಪರೀಕ್ಷೆಗಾಗಿ ಮಕ್ಕಳನ್ನು ಚೆನ್ನಾಗಿ ತಯಾರು ಮಾಡುತ್ತಿದ್ದಾರೆ. ನಿಮ್ಮ ಆಶೀರ್ವಾದ ಅವರಿಗೆ ಬಹಳ ಮುಖ್ಯ ಎಂದು ಕಿವಿ ಮಾತನ್ನು ತಿಳಿಸಿದರು.

ಶಕ್ತಿ ವಿದ್ಯಾಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಮಾತನಾಡಿ ಇದೊಂದು ವಿನೂತನ ಕಾರ್‍ಯಕ್ರಮ. ಜೀವನದಲ್ಲಿ ಮಕ್ಕಳಿಗೆ ತಂದೆ ತಾಯಿಗಳ ಮಹತ್ವ ಬಹಳಷ್ಟಿದೆ. ನಮ್ಮ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಸಂಸ್ಕಾರಯುತ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು, ಮಕ್ಕಳ ಸರ್ವಾಂಗೀಣ ಪ್ರಗತಿ ಆಗಬೇಕು, ಭಾರತೀಯ ಸಂಸ್ಕಾರಯುತ ಶಿಕ್ಷಣವನ್ನು ಕೊಡಬೇಕು ಎಂಬುದು ಡಾ.ಕೆ.ಸಿ. ನಾೖಕ್‌ ರವರ ಉದ್ದೇಶ. ಇಲ್ಲಿಗೆ ರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಮಕ್ಕಳು ವ್ಯಾಸಂಗ ಮಾಡಲು ಬಂದಾಗಿನಿಂದ ಇಲ್ಲಿಯವರೆಗೂ ಸಾಕಷ್ಟು ಧನಾತ್ಮಕ ಬದಲಾವಣೆಯನ್ನು ನಾವು ಗಮನಿಸಿದ್ದೇವೆ. ಸದಾ ಮಕ್ಕಳ ಸರ್ವಾಂಗೀಣ ಪ್ರಗತಿಯನ್ನು ಬಯಸುವ ಡಾ. ಕೆ. ಸಿ. ನಾೖಕ್‌ ಅವರು ಪ್ರತಿನಿತ್ಯ ಶಿಕ್ಷಕ ಸಿಬ್ಬಂದಿಯ ಜೊತೆ ಚರ್ಚಿಸಿ ಮಕ್ಕಳ ಪ್ರಗತಿಗೆ ಪೂರಕವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮಕ್ಕಳು ಕಲಿತಿದ್ದಾರೆ. ಇದರ ಪ್ರತಿಫಲವನ್ನು ಭವಿಷ್ಯದಲ್ಲಿ ಅವರು ಉತ್ತಮ ಪ್ರಜೆಗಳಿಗಾಗಿ ಬದಲಾಗುವುದನ್ನು ಕಾಣುತ್ತೇವೆ. ತಂದೆ ತಾಯಿ ಕುಟುಂಬದ ಮಹತ್ವವನ್ನು ಅರ್ಥಮಾಡಿಸಿ ಭವಿಷ್ಯದಲ್ಲಿ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಸಂಸ್ಕಾರವನ್ನು ಮಕ್ಕಳು ಕಲಿಯಲಿ ಎಂಬ ಉದ್ದೇಶದಿಂದ ಈ ಆಶೀರ್ವಾದ ಸಭೆಯನ್ನು ಯೋಜನೆ ಮಾಡಲಾಗಿದೆ.

ನಂತರ ಅಧ್ಯಕ್ಷತೆ ವಹಿಸಿದ್ದ ಡಾ.ಕೆ.ಸಿ.ನಾೖಕ್‌ ರವರು ಮಾತನಾಡಿ ಮಕ್ಕಳು ಇಲ್ಲಿ ಶಿಕ್ಷಣವನ್ನು ಪಡೆದು ಭಾರತದ ಉತ್ತಮ ಪ್ರಜೆಗಳಾಗಲಿ. ಪ್ರೀತಿ ವಿಶ್ವಾಸದಿಂದ ಮಕ್ಕಳಿಗೆ ಚೆನ್ನಾಗಿ ಅಭ್ಯಸಿಸಲು ಪ್ರೇರೇಪಿಸಲಿ ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಅಮನ್, ಅಭಿನ್, ರಕ್ಷಾ, ಜುವೆಲ್ ತಮ್ಮ ಶಾಲಾ ದಿನಗಳ ಅನುಭವವನ್ನು ಹಂಚಿಕೊಂಡರು.

ಈ ಅರ್ಥಪೂರ್ಣವಾದ ಕಾರ್ಯಕ್ರಮಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳೆಲ್ಲರೂ ಸೇರಿ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಪಡೆದುಕೊಂಡ ನೆನಪಿಗಾಗಿ ಒಂದು ಮ್ಯೂಸಿಕ್ ಮಿಕ್ಸರ್ ಎಂಬ ಉಪಕರಣವನ್ನು ಉಡುಗೊರೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಪ್ರಧಾನ ಸಲಹೆಗಾರರಾದ ರಮೇಶ್ ಕೆ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ಶರಣಪ್ಪ, ಮರಿಯ ಕಾರ್ಯಕ್ರಮವನ್ನು ನಿರೂಪಿಸಿದರು. ಸ್ಮಿಶಾ ಧನ್ಯವಾದ ಸಲ್ಲಿಸಿದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

  Mrs. Babitha Suraj Principal Mrs. Sushma Satish Coordinator –...