ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಶಕ್ತಿನಗರ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪಪೂ ಕಾಲೇಜು ವತಿಯಿಂದ ಜಿಲ್ಲಾ ಮಟ್ಟದ ಕೃಷ್ಟಮಯ – 2024 ಕೃಷ್ಣ ವೇಷ ಸ್ಪರ್ಧೆಯನ್ನು ದಿನಾಂಕ 17-8-2024 ರ ಶನಿವಾರ ಪೂರ್ವಾಹ್ನ 9.30 ಕ್ಕೆ ಶಕ್ತಿ ವಸತಿ ಶಾಲೆ ಶಕ್ತಿನಗರದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಗಳ ವಿವರ ಈ ಕೆಳಗಿನಂತಿದೆ.
ವಿಭಾಗ 1 ರಲ್ಲಿ 3 ವರ್ಷ ತನಕದ ಮಕ್ಕಳಿಗೆ ಬೆಣ್ಣೆ ಕೃಷ್ಣ, 3 ರಿಂದ 6 ವರ್ಷ ತನಕದ ಮಕ್ಕಳಿಗೆ ಬಾಲಕೃಷ್ಣ, 1 ರಿಂದ 4ನೇ ತರಗತಿಯ ಮಕ್ಕಳಿಗೆ ಯಶೋದ ಕೃಷ್ಣ, 5 ರಿಂದ 7 ನೇ ತರಗತಿಯ ಮಕ್ಕಳಿಗೆ ದಾಸರ ಕೀರ್ತನೆಗಳು, 8 ರಿಂದ 10 ನೇ ತರಗತಿಯ ಮಕ್ಕಳಿಗೆ ಗೋಪಿಕಾ ಕೃಷ್ಣ. ಗೀತಾ ಕಂಠಪಾಠ ಸ್ಪರ್ಧೆಯಲ್ಲಿ 1-5 ನೇ ತರಗತಿಯ ಮಕ್ಕಳಿಗೆ ಧ್ಯಾನ ಶ್ಲೋಕ 1-8, 6 ರಿಂದ 7 ನೇ ತರಗತಿಯ ಮಕ್ಕಳಿಗೆ ಅಧ್ಯಾಯ – 12 (1-10 ನೇ ಶ್ಲೋಕ) 8 ರಿಂದ 10 ನೇ ತರಗತಿಯ ಮಕ್ಕಳಿಗೆ ಅಧ್ಯಾಯ – 15, 1-10 ನೇ ಶ್ಲೋಕ, ಚಿತ್ರಕಲಾ ಸ್ಪರ್ಧೆ 8 ರಿಂದ 10 ನೇ ತರಗತಿಯ ಮಕ್ಕಳಿಗೆ ಶ್ರೀ ಕೃಷ್ಣನ ಬಾಲ ಲೀಲೆಗಳು. ಕುಣಿತ ಭಜನೆ 6 ರಿಂದ 10 ತರಗತಿಯ ಮಕ್ಕಳಿಗೆ ಶ್ರೀ ಕೃಷ್ಣನ ಭಜನೆಗಳು ೧೦ ಜನರ ತಂಡಕ್ಕೆ 4 ನಿಮಿಷ ಅವಕಾಶ ನೀಡಲಾಗಿದೆ. ಒಂದು ಶಾಲೆಯಿಂದ ಎಷ್ಟು ತಂಡಗಳಿಗೂ ಭಾಗವಹಿಸುವ ಅವಕಾಶವಿದೆ. ವೆಬ್ಸೈಟ್ ನೋಂದಣಿಗೆ ಹಾಗೂ ಹೆಚ್ಚಿನ ಮಾಹಿತಿಗೋಸ್ಕರ ವೆಬ್ ಸೈಟ್ www.shakthi.edu.in, email: schooloffice@shakthi.edu.in ಮತ್ತು ದೂರವಾಣಿ ಸಂಖ್ಯೆ 0824-2231452/8431247433 ಗೆ ಸಂಪರ್ಕಿಸಲು ಕೋರಲಾಗಿದೆ.
ವಿವರಗಳಿಗಾಗಿ ಕೆಳಗಿನ ಲಿಂಕ್ ಮಾಡಿ.