Call Us :
+91 96860 00046
CBSE

Shakthi Education Trust

+91 9108043552
info@shakthi.edu.in

’ಶಕ್ತಿ ಕ್ಯಾನ್ ಕ್ರಿಯೇಟ್’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ನಡೆಯುತ್ತಿರುವ 10 ದಿನಗಳ ’ಶಕ್ತಿ ಕ್ಯಾನ್ ಕ್ರೀಯೆಟ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಇಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ ಶೆಟ್ಟಿ ಆಗಮಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಶಕ್ತಿ ವಿದ್ಯಾ ಸಂಸ್ಥೆಯು ಮಕ್ಕಳಿಗೆ ಕೊಡುತ್ತಿರುವ ಶಿಸ್ತು ಮತ್ತು ಸಂಸ್ಕಾರವನ್ನು ನೋಡಿ ನಾನು ಪ್ರಭಾವಿತನಾಗಿದ್ದೇನೆ. ಶಿಕ್ಷಣವನ್ನು ಕೊಡುವ ಶಿಕ್ಷಣ ಸಂಸ್ಥೆಗಳು ಅನೇಕ ಇರಬಹುದು. ಆದರೆ ಪಠ್ಯದ ಜೊತೆಗೆ ವ್ಯಕ್ತಿತ್ವ ನಿರ್ಮಾಣದ ಶಿಸ್ತು ಮತ್ತು ಸಂಸ್ಕಾರವನ್ನು ಕೊಡುವುದು ಬಹಳಷ್ಟು ಮುಖ್ಯವಾಗಿರುತ್ತದೆ. ರಾಮ ಭಾರತಕ್ಕೆ ಶ್ರೇಷ್ಠ ವ್ಯಕ್ತಿತ್ವ ಯಾಕೆಂದರೆ ಅವನಲ್ಲಿರುವ ಶ್ರೇಷ್ಠ ಗುಣಗಳೇ ಇದಕ್ಕೆ ಕಾರಣ. ಇವತ್ತು ರಾಮನನ್ನು ಕೇವಲ ಧರ್ಮಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಅವನಲ್ಲಿರುವ ಗುಣಗಳು ಎಲ್ಲರೂ ಅಳವಡಿಸಿದಾಗ ನಾವೆಲ್ಲರೂ ಶ್ರೇಷ್ಠತೆಯನ್ನು ಪಡೆಯಲು ಸಾಧ್ಯ ಎಂದು ಹೇಳಿದರು.

ಇಂದಿನ ಕಾಲಮಾನಕ್ಕೆ ಪಠ್ಯದ ಜೊತೆ ಸಂಸ್ಕಾರ ಕೊಡುವುದು ಮುಖ್ಯವಾಗಿದೆ. ಯಾಕೆಂದರೆ ಮುಂದಿನ ದಿನಗಳಲ್ಲಿ ನಾವು ಹೆಚ್ಚು ಹೆಚ್ಚು ಶಿಕ್ಷಣ ಪಡೆದ ನಂತರ ತಂದೆ ಮತ್ತು ತಾಯಿಯನ್ನು ಮರೆತು ಅವರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಸಾಧ್ಯತೆಯಿದೆ. ಆದ್ದರಿಂದ ನಾವೆಲ್ಲರೂ ಶಿಕ್ಷಣದ ಜೊತೆ ಭಾರತದ ಗುರುಕುಲ ಮಾದರಿಯ ಶಿಸ್ತು ಮತ್ತು ಸಂಸ್ಕಾರವನ್ನು ಪಡೆಯಬೇಕೆಂದು ಕರೆ ನೀಡಿದರು. ನಾನು ಈ ಬೇಸಿಗೆ ಶಿಬಿರದ ವಿದ್ಯಾರ್ಥಿಗಳ ಮುಖದಲ್ಲಿ ಅಂತಹ ಸಂಸ್ಕಾರವನ್ನು ಕಾಣುತ್ತಿದ್ದೇನೆ. ಇದು ಈ ಶಿಬಿರದಲ್ಲಿ ಸಾಧ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ. ಮಾತನಾಡಿ ಶಕ್ತಿ ಶಿಕ್ಷಣ ಸಂಸ್ಥೆ ಕಳೆದ 7 ವರ್ಷಗಳಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಂಸ್ಕಾರವನ್ನು ಕೊಡುವ ಕೆಲಸವನ್ನು ನಿರಂತರವಾಗಿ ಕೊಡುತ್ತಾ ಬಂದಿದೆ. ಪ್ರತಿ ದಿನ ಪ್ರಾರ್ಥನೆಯ ಮೂಲಕ ಶಿಸ್ತನ್ನು ಕಲಿಸಿ ಕೊಡುತ್ತಿದೆ. ಈ 10 ದಿನದ ಶಿಬಿರದ ಯಶಸ್ವಿಗೋಸ್ಕರ ಶ್ರಮಿಸಿದ ಸಂಸ್ಥೆಯ ಶಿಕ್ಷಕ- ಶಿಕ್ಷಕೇತರನ್ನು ಅಭಿನಂದಿಸಿದರು. ಇಲ್ಲಿ ಕಲಿಸಿಕೊಟ್ಟಿರುವ ಪ್ರತಿಯೊಂದು ವಿದ್ಯೆಯನ್ನು ದಿನ ನಿತ್ಯ ನಿಮ್ಮ ಜೀವನದಲ್ಲಿ ಅಳವಡಿಸುವಂತೆ ಕರೆ ನೀಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಸಂಸ್ಥಾಪಕರಾದ ಡಾ.ಕೆ.ಸಿ.ನಾೖಕ್‌ ಅವರು ಪಟ್ಲ ಸತೀಶ ಶೆಟ್ಟಿಯವರನ್ನು ಸನ್ಮಾನಿಸಿದರು. ನಂತರ ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿಶೇಷವಾದ ಸಾಂಸ್ಕೃತಿಕ ಕಾರ್ಯಕ್ರಮವು ಆಯೋಜನೆಯಾಗಿತು. 4 ವಿದ್ಯಾರ್ಥಿಗಳು ಮತ್ತು 4 ಪೋಷಕರು ಶಿಬಿರದ ಉಪಯೋಗದ ಕುರಿತಂತೆ ಅಭಿಪ್ರಾಯ ತಿಳಿಸಿದರು. ವೇದಿಕೆಯಲ್ಲಿ ಶಕ್ತಿ ರೆಸಿಡೆನ್ಸಿಯಲ್ ಶಾಲೆ ಪ್ರಾಂಶುಪಾಲೆ ಬಬಿತಾ ಸೂರಜ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತವನ್ನು ರೇಖಾ ಮತ್ತು ಧನ್ಯವಾದವನ್ನು ಭಾಸ್ಕರ ಎನ್ ಹಾಗೂ ನಯನ ಕುಮಾರಿ ಇವರು ನಿರೂಪಿಸಿದರು.

About School

Residential School

Shakthi Residential School, founded in the year 2015, beginning with...

Vision & Mission

Shakthi is power or energy. The human body, mind and...

Management

Mr. Sanjith Naik  – Managing Trustee, Correspondent & Secretary Sanjith Naik, has...

Teaching Staff

Mrs. Babitha Suraj Principal Mr. Bhaskara N PGT – Social...